ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
Cross references
ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
ಆದಾಮನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಮೂವತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.
ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.
ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.
ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.