ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.
Cross references
ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.