ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
Cross references
ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು.
ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ.
ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು.
ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.
ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.