Home Bibles ರೋಮಾಪುರದವರಿಗೆ 5:2 · ಕನ್ನಡ ಬೈಬಲ್
ರೋಮಾಪುರದವರಿಗೆ 5:2 · ಕನ್ನಡ ಬೈಬಲ್

ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.

Cross references

ನಿರ್ಗಮಕಾಂಡ 33:18

ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು.

ಯೋಬ 19:25

ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;

ಕೀರ್ತನೆಗಳು 16:9

ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.

ಕೀರ್ತನೆಗಳು 17:15

ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.

ಕೀರ್ತನೆಗಳು 73:24

ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.

ಸಾಮೇತಿಗಳು 14:32

ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.

ಮತ್ತಾಯ 25:21

ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

ಯೋಹಾನ 5:24

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.

ಯೋಹಾನ 10:7

ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.

ಯೋಹಾನ 10:9

ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.

ಯೋಹಾನ 14:6

ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ಅಪೋಸ್ತಲರ ಕೃತ್ಯಗಳು 14:27

ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.

ರೋಮಾಪುರದವರಿಗೆ 2:7

ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ

ರೋಮಾಪುರದವರಿಗೆ 3:23

ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.

ರೋಮಾಪುರದವರಿಗೆ 5:5

ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.

ರೋಮಾಪುರದವರಿಗೆ 5:9

ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.

ರೋಮಾಪುರದವರಿಗೆ 8:1

ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.

ರೋಮಾಪುರದವರಿಗೆ 8:17

ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.

ರೋಮಾಪುರದವರಿಗೆ 8:24

ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?

ರೋಮಾಪುರದವರಿಗೆ 8:30

ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.

ರೋಮಾಪುರದವರಿಗೆ 12:12

ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.

ರೋಮಾಪುರದವರಿಗೆ 14:4

ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.

ರೋಮಾಪುರದವರಿಗೆ 15:13

ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.

1 ಕೊರಿಂಥದವರಿಗೆ 15:1

ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ.

2 ಕೊರಿಂಥದವರಿಗೆ 3:18

ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.

2 ಕೊರಿಂಥದವರಿಗೆ 4:17

ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.

ಎಫೆಸದವರಿಗೆ 2:18

ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.

ಎಫೆಸದವರಿಗೆ 3:12

ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು.

ಎಫೆಸದವರಿಗೆ 6:13

ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.

2 ತೆಸಲೋನಿಕದವರಿಗೆ 2:16

ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.

ಹೆಬ್ರಿಯರಿಗೆ 3:6

ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.

ಹೆಬ್ರಿಯರಿಗೆ 6:18

ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.

ಹೆಬ್ರಿಯರಿಗೆ 10:19

ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.

1 ಪೇತ್ರ 1:3

ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ

1 ಪೇತ್ರ 3:18

ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.

1 ಯೋಹಾನ 3:1

ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.

ಪ್ರಕಟನೆ 3:21

ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

ಪ್ರಕಟನೆ 21:3

ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ

ಪ್ರಕಟನೆ 21:11

ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.

ಪ್ರಕಟನೆ 21:23

ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.

Interlinear

Choose Theme