ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
Cross references
ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.