ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
Cross references
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.