ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
Cross references
ಪುರುಷನ ತಲೆಯ ಕೂದಲು ಉದುರಿಹೋದರೆ ಅವನು ಬೋಳು ತಲೆಯವನು, ಆದಾಗ್ಯೂ ಅವನು ಶುದ್ಧನಾಗಿರುವನು.
ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.
ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.
ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು.
ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ
ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.