Home Bibles ರೋಮಾಪುರದವರಿಗೆ 6:22 · ಕನ್ನಡ ಬೈಬಲ್
ರೋಮಾಪುರದವರಿಗೆ 6:22 · ಕನ್ನಡ ಬೈಬಲ್

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.

Cross references

ಆದಿಕಾಂಡ 50:17

ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು.

ಅಂಕೆಗಳ ಪುಸ್ತಕ 23:10

ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.

ಯೋಬ 1:8

ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು.

ಕೀರ್ತನೆಗಳು 37:37

ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.

ಕೀರ್ತನೆಗಳು 86:2

ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು.

ಕೀರ್ತನೆಗಳು 92:14

ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.

ಕೀರ್ತನೆಗಳು 143:12

ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.

ಯೆಶಾಯ 54:17

ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.

ದಾನಿಯೇಲ 3:26

ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.

ದಾನಿಯೇಲ 6:20

ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.

ಮತ್ತಾಯ 13:40

ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.

ಮತ್ತಾಯ 13:43

ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.

ಮತ್ತಾಯ 19:29

ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.

ಮತ್ತಾಯ 25:46

ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

ಯೋಹಾನ 4:36

ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.

ಯೋಹಾನ 8:32

ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.

ಯೋಹಾನ 15:2

ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.

ಯೋಹಾನ 15:16

ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.

ರೋಮಾಪುರದವರಿಗೆ 6:14

ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.

ರೋಮಾಪುರದವರಿಗೆ 6:18

ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.

ರೋಮಾಪುರದವರಿಗೆ 6:21

ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.

ರೋಮಾಪುರದವರಿಗೆ 7:4

ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.

ರೋಮಾಪುರದವರಿಗೆ 7:25

ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.

ರೋಮಾಪುರದವರಿಗೆ 8:2

ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.

1 ಕೊರಿಂಥದವರಿಗೆ 7:22

ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.

2 ಕೊರಿಂಥದವರಿಗೆ 3:17

ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.

ಗಲಾತ್ಯದವರಿಗೆ 1:10

ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.

ಗಲಾತ್ಯದವರಿಗೆ 5:13

ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.

ಗಲಾತ್ಯದವರಿಗೆ 5:22

ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ

ಎಫೆಸದವರಿಗೆ 5:9

ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.

ಫಿಲಿಪ್ಪಿಯವರಿಗೆ 1:11

ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.

ಫಿಲಿಪ್ಪಿಯವರಿಗೆ 4:17

ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.

ಕೊಲೊಸ್ಸೆಯವರಿಗೆ 1:10

ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ

ಕೊಲೊಸ್ಸೆಯವರಿಗೆ 4:12

ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.

ತೀತ 1:1

ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ

ಯಾಕೋಬ 1:1

ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್‌) ಹನ್ನೆರಡು ಗೋತ್ರದವರಿಗೆ ವಂದನೆ.

1 ಪೇತ್ರ 1:9

ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.

1 ಪೇತ್ರ 2:16

ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.

ಪ್ರಕಟನೆ 7:13

ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.

Interlinear

Choose Theme