ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
Cross references
ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.
ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.
ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.
ಕುಷ್ಠವು ಒಡೆದು ಚರ್ಮದ ಹೊರಗೆ ಹರಡಿ ಕೊಂಡಿದ್ದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಅವನ ಪಾದದ ವರೆಗೂ ಹರಡಿರುವದನ್ನು ಯಾಜಕನು ಎಲ್ಲಿಯಾದರೂ ನೋಡಿದರೆ
ಇಲ್ಲವೆ ಹಸಿಮಾಂಸವು ಮತ್ತೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.
ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ.
ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.
ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.
ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.
ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ.
ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.