ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
Cross references
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.
ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.