ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
Cross references
ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ.
ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು.
ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
ಈ ಪ್ರೇರಣೆಯು ನಿಮ್ಮನ್ನು ಕರೆದಾತನಿಂದ ಬಂದದ್ದಲ್ಲ.
ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.
ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.
ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.