Home Bibles ರೋಮಾಪುರದವರಿಗೆ 8:3 · ಕನ್ನಡ ಬೈಬಲ್
ರೋಮಾಪುರದವರಿಗೆ 8:3 · ಕನ್ನಡ ಬೈಬಲ್

ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.

Cross references

ಅಂಕೆಗಳ ಪುಸ್ತಕ 21:9

ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.

ಮಾರ್ಕ 15:27

ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು.

ಯೋಹಾನ 1:14

ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).

ಯೋಹಾನ 3:14

ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.

ಯೋಹಾನ 9:24

ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.

ಅಪೋಸ್ತಲರ ಕೃತ್ಯಗಳು 13:39

ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.

ರೋಮಾಪುರದವರಿಗೆ 3:20

ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.

ರೋಮಾಪುರದವರಿಗೆ 6:6

ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.

ರೋಮಾಪುರದವರಿಗೆ 7:5

ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.

ರೋಮಾಪುರದವರಿಗೆ 8:32

ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?

ರೋಮಾಪುರದವರಿಗೆ 9:3

ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.

2 ಕೊರಿಂಥದವರಿಗೆ 5:21

ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

ಗಲಾತ್ಯದವರಿಗೆ 3:13

ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

ಗಲಾತ್ಯದವರಿಗೆ 3:21

ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.

ಗಲಾತ್ಯದವರಿಗೆ 4:4

ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ

ಫಿಲಿಪ್ಪಿಯವರಿಗೆ 2:7

ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.

ಹೆಬ್ರಿಯರಿಗೆ 2:14

ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ

ಹೆಬ್ರಿಯರಿಗೆ 2:17

ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.

ಹೆಬ್ರಿಯರಿಗೆ 4:15

ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.

ಹೆಬ್ರಿಯರಿಗೆ 7:18

ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.

ಹೆಬ್ರಿಯರಿಗೆ 10:1

ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.

ಹೆಬ್ರಿಯರಿಗೆ 10:12

ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.

ಹೆಬ್ರಿಯರಿಗೆ 10:14

ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.

1 ಪೇತ್ರ 2:24

ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

1 ಪೇತ್ರ 4:1

ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.

1 ಯೋಹಾನ 4:10

ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.

Interlinear

Choose Theme