ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
Cross references
ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ.
ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ,
ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.