ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
Cross references
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
ಅವರು ಅವನ ಎದುರಿ ನಿಂದ ಓಡಿಹೋದರು. ಅರಾಮ್ಯರು ಓಡಿಹೋದದ್ದನ್ನು ಅಮ್ಮೋನಿಯರು ನೋಡಿದಾಗ ಅವರು ಹಾಗೆಯೇ ಅವನ ಸಹೋದರನಾದ ಅಬ್ಷೈನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಪ್ರವೇಶಿಸಿದರು. ಆಗ ಯೋವಾಬನು ಯೆರೂಸಲೇಮಿಗೆ ಬಂದನು.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು?
ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು--
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.