ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
Cross references
ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.