ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
Cross references
ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
ಮನುಷ್ಯನ ಹೃದಯದ ಆಲೋ ಚನೆಯು ಆಳವಾದ (ಬಾವಿಯ) ನೀರಿನಂತಿದೆ; ವಿವೇ ಕಿಯು ಅದನ್ನು ಸೇದುವನು.
ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ
ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.
ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.
ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.
ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.