ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.
Cross references
ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ?
ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.