ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.
Cross references
ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.
ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ--
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;