ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
Cross references
ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.
ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.
ಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.
ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು.
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.