ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
Cross references
ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.
ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.
ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.
ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್ ಎಂದು ಹೇಳುವದು ಹೇಗೆ?
ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;
ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ.
ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.