ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು.
Cross references
ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
ತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.
ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಆ ಸ್ತ್ರೀಯ ತಂದೆ ಆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ಈ ರಾತ್ರಿ ಇರು ಅಂದನು.
ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.
ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.
ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.