Home Bibles ಪರಮಗೀತ 1:12 · ಕನ್ನಡ ಬೈಬಲ್
ಪರಮಗೀತ 1:12 · ಕನ್ನಡ ಬೈಬಲ್

ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ.

Cross references

ಕೀರ್ತನೆಗಳು 45:1

ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.

ಪರಮಗೀತ 4:13

ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.

ಪರಮಗೀತ 7:5

ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.

ಮತ್ತಾಯ 22:4

ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.

ಮತ್ತಾಯ 22:11

ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.

ಮತ್ತಾಯ 25:34

ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;

ಮತ್ತಾಯ 26:26

ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.

ಮಾರ್ಕ 14:3

ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.

ಲೂಕ 24:30

ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.

ಯೋಹಾನ 12:3

ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.

ಫಿಲಿಪ್ಪಿಯವರಿಗೆ 4:18

ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ

ಪ್ರಕಟನೆ 3:20

ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.

ಪ್ರಕಟನೆ 8:3

ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.

Interlinear

Choose Theme