ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.
Cross references
ಅವನ ತಂದೆಯಾದ ಇಸಾಕನು ಅವನಿಗೆ--ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು ಅಂದನು.
ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು.
ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
ಔತಣದ ಮನೆಗೆ ನನ್ನನ್ನು ಕರಕೊಂಡು ಬಂದನು; ನನ್ನ ಮೇಲೆ ಅವನ ಧ್ವಜ ಪ್ರೀತಿಯೇ.
ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ!
ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
ಓ ಪ್ರಿಯಳೇ, ನೀನು ಆನಂದಗಳಿಗಾಗಿ ಎಷ್ಟೋ ಸುಂದರಿಯು, ಎಷ್ಟೋ ಮನೋಹರಳು ಆಗಿದ್ದೀ.
ನಿನ್ನ ಬಾಯಿಯ ಅಂಗಳವು ನನ್ನ ಪ್ರಿಯನ ಉತ್ತಮವಾದ ದ್ರಾಕ್ಷಾರಸದ ಹಾಗಿರುವದು. ಅದು ಸಿಹಿಯಾಗಿ ಹೋಗುವಂಥದ್ದು, ನಿದ್ರೆಮಾಡುವವರ ತುಟಿಗಳನ್ನು ಮಾತಾಡಿಸುವಂಥದ್ದು.
ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
ನೀನು ನನ್ನ ತಾಯಿಯ ಸ್ತನಗಳನ್ನು ಕುಡಿದ ನನ್ನ ಸಹೋದರನ ಹಾಗೆ ಇದ್ದರೆ ಎಷ್ಟೋ ಉತ್ತಮ! ನಾನು ನಿನ್ನನ್ನು ಹೊರಗೆ ಕಂಡರೆ ನಿನಗೆ ಮುದ್ದಿಡುವೆನು; ಹೌದು, (ಜನರು) ನನ್ನನ್ನು ತಿರಸ್ಕರಿಸರು.
ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
ತೂರಿನಿಂದ ಪ್ರಯಾಣವನ್ನು ಮುಗಿಸಿದ ಮೇಲೆ ಪ್ತೊಲೆಮಾಯಕ್ಕೆ ಬಂದು ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದೆವು.
ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.