ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
Cross references
ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.
ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು.
ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.
ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ.
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
ಇಗೋ, ನನ್ನ ಪ್ರಿಯಳೇ, ನೀನು ಸೌಂದರ್ಯ ವಂತೆಯು, ಇಗೋ, ನೀನು ಸೌಂದರ್ಯವಂತೆಯು ನಿನಗೆ ಪಾರಿವಾಳದ ಕಣ್ಣುಗಳಿವೆ.
ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.
ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.
ತೋಟಗಳಲ್ಲಿ ವಾಸವಾಗಿರುವವನೇ, ಜತೆ ಗಾರರು ನಿನ್ನ ಶಬ್ದವನ್ನು ಆಲೈಸುತ್ತಾರೆ. ನಾನು ಕೇಳುವಂತೆ ಮಾಡು.ನನ್ನ ಪ್ರಿಯನೇ, ತ್ವರೆಮಾಡು, ಜಿಂಕೆಯ ಹಾಗೆ ಇಲ್ಲವೆ ಸುಗಂಧವುಳ್ಳ ಪರ್ವತಗಳ ಮೇಲಿರುವ ದುಪ್ಪಿ ಮರಿಯ ಹಾಗೆಯೆ ಇರು.
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ.
ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.
ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.
ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.