ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
Cross references
ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು.
ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.
ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
ದ್ರಾಕ್ಷೆಯ ಉಂಡಿಗಳಿಂದ ನನ್ನನ್ನು ಹಿಡಿದಿರು; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸು; ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.
ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯ ವೇನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನೀನು ನಮಗೆ ಹೀಗೆ ಆಣೆ ಇಡುವದಕ್ಕೆ ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು?
ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು.
ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು
ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು;
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.