ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
Cross references
ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
ನಾನು ತಿಳಿದಿದ್ದಾಗ ನನ್ನ ಪ್ರಾಣವು ನನ್ನನ್ನು ಅಮ್ಮಿನಾದಿಬ್ನ ರಥಗಳ ಹಾಗೆ ಮಾಡಿತು.ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
ನೀನು ನನ್ನನ್ನು ಉಪದೇಶಿಸುವ ಹಾಗೆ ನಾನು ನಿನ್ನನ್ನು ನಡಿಸಿ ನನ್ನ ತಾಯಿಯ ಮನೆಯೊಳಗೆ ನಿನ್ನನ್ನು ಬರಮಾಡಿ, ದಾಳಿಂಬರ ಹಣ್ಣಿನ ರಸವಾದ ಊರಿಟ್ಟ ಪಾನವನ್ನು ನಿನಗೆ ಕುಡಿಸುತ್ತಿದ್ದೆನು.
ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.
ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ.
ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.
ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;