ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ.
Cross references
ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.
ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು
ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.