ಉದಯವಾಗುವ ವರೆಗೂ ನೆರಳುಗಳು ಓಡಿಹೋಗುವ ವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.
Cross references
ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.
ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು,
ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.