ಅವನ ಕಾಲುಗಳು ಶುದ್ಧ ಬಂಗಾರದ ಗದ್ದಿಗೆಯ ಮೇಲೆ ಇರಿಸಿದ ಬಿಳೀ ಕಲ್ಲಿನ ಸ್ತಂಭಗಳ ಹಾಗೆ ಅವೆ. ಅವನ ಮುಖವು ಲೆಬನೋನಿನ ಹಾಗೆ ದೇವದಾರುಗಳ ಹಾಗೆ ಶ್ರೇಷ್ಠವಾಗಿದೆ.ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
Cross references
ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.
ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು. ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನು.ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.
ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್ರಬ್ಬಿ ಮ್ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ.
ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು.
ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.
ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.