ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
Cross references
ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ.
ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.
ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು; ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ.
ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.