ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು.
Cross references
ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
ಆದರೆ ನನ್ನ ಪ್ರಾಣವನ್ನು ನಾಶಮಾಡುವದಕ್ಕೆ ಹುಡುಕುವವರು ಭೂಮಿಯ ಕೆಳಭಾಗಗಳಿಗೆ ಹೋಗು ವರು.
ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
ನನ್ನ ಸಂಗಡ ಲೆಬನೋನಿನಿಂದ ಬಾ, ಪತ್ನಿಯೇ; ಲೆಬನೋನಿನಿಂದ ನನ್ನ ಸಂಗಡ ಬಾ. ಅಮಾನದ ಶಿಖರದಿಂದ, ಶೆನೀರ್, ಹೆರ್ಮೋನ್ ಶಿಖರದಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ದೃಷ್ಟಿಸು.
ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
ನೀನು ನನ್ನ ತಾಯಿಯ ಸ್ತನಗಳನ್ನು ಕುಡಿದ ನನ್ನ ಸಹೋದರನ ಹಾಗೆ ಇದ್ದರೆ ಎಷ್ಟೋ ಉತ್ತಮ! ನಾನು ನಿನ್ನನ್ನು ಹೊರಗೆ ಕಂಡರೆ ನಿನಗೆ ಮುದ್ದಿಡುವೆನು; ಹೌದು, (ಜನರು) ನನ್ನನ್ನು ತಿರಸ್ಕರಿಸರು.
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.