ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
Cross references
ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.
ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.
ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.
ಗಂಡನ ಮೇಲೆ ರೋಷದ ಆತ್ಮ ಬಂದು ಅವನು ಅಶುದ್ಧಳಾದ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ ಇಲ್ಲವೆ ರೋಷದ ಆತ್ಮವು ಅವನ ಮೇಲೆ ಬಂದು ಅಶುದ್ಧಳಾಗದೆ ಇರುವ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ,
ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು.
ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.
ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.
ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.