ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
Cross references
ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಅವರು ಆತನಿಗೆ ಯಾವ ಪ್ರಶ್ನೆಯನ್ನೂ ಕೇಳುವದಕ್ಕೆ ಧೈರ್ಯಗೊಳ್ಳಲಿಲ್ಲ.
ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.
ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ