Home Bibles ತೀತ 1:11 · ಕನ್ನಡ ಬೈಬಲ್
ತೀತ 1:11 · ಕನ್ನಡ ಬೈಬಲ್

ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.

Cross references

ಕೀರ್ತನೆಗಳು 63:11

ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.

ಕೀರ್ತನೆಗಳು 107:42

ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.

ಯೆಶಾಯ 56:10

ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.

ಯೆರೆಮಿಯ 8:10

ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.

ಯೆಹೆಜ್ಕೇಲ 13:19

ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?

ಯೆಹೆಜ್ಕೇಲ 16:63

ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.

ಮೀಕ 3:5

ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.

ಮೀಕ 3:11

ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.

ಮತ್ತಾಯ 23:13

ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.

ಲೂಕ 20:40

ಅವರು ಆತನಿಗೆ ಯಾವ ಪ್ರಶ್ನೆಯನ್ನೂ ಕೇಳುವದಕ್ಕೆ ಧೈರ್ಯಗೊಳ್ಳಲಿಲ್ಲ.

ಯೋಹಾನ 10:12

ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.

ರೋಮಾಪುರದವರಿಗೆ 3:19

ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

2 ಕೊರಿಂಥದವರಿಗೆ 11:10

ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.

1 ತಿಮೋಥೆಯ 6:5

ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.

2 ತಿಮೋಥೆಯ 3:6

ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.

ತೀತ 1:7

ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ

ತೀತ 1:9

ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.

ತೀತ 3:10

ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;

2 ಪೇತ್ರ 2:1

ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ

Interlinear

Choose Theme