Home Bibles ತೀತ 1:16 · ಕನ್ನಡ ಬೈಬಲ್
ತೀತ 1:16 · ಕನ್ನಡ ಬೈಬಲ್

ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.

Cross references

ಅಂಕೆಗಳ ಪುಸ್ತಕ 24:16

ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--

1 ಸಮುವೇಲ 15:22

ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.

1 ಸಮುವೇಲ 15:24

ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.

ಯೋಬ 15:16

ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!

ಯೆಶಾಯ 29:13

ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಯೆಶಾಯ 48:1

ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

ಯೆಶಾಯ 58:2

ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.

ಯೆರೆಮಿಯ 6:30

ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.

ಯೆಹೆಜ್ಕೇಲ 33:31

ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.

ಹೊಶೇಯ 8:2

ಇಸ್ರಾಯೇಲಿ ನವರು--ನನ್ನ ದೇವರೇ, ನಾವು ನಿನ್ನನ್ನು ತಿಳಿದಿದ್ದೇವೆ ಎಂದು ನನಗೆ ಕೂಗುವರು.

ರೋಮಾಪುರದವರಿಗೆ 1:28

ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.

ರೋಮಾಪುರದವರಿಗೆ 2:18

ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;

ಎಫೆಸದವರಿಗೆ 5:6

ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.

1 ತಿಮೋಥೆಯ 1:9

ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ

1 ತಿಮೋಥೆಯ 5:8

ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.

2 ತಿಮೋಥೆಯ 3:5

ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.

1 ಯೋಹಾನ 2:4

ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.

ಯೂದ 1:4

ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ

ಪ್ರಕಟನೆ 21:8

ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

ಪ್ರಕಟನೆ 21:27

ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.

Interlinear

Choose Theme