ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
Cross references
ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--
ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
ಇಸ್ರಾಯೇಲಿ ನವರು--ನನ್ನ ದೇವರೇ, ನಾವು ನಿನ್ನನ್ನು ತಿಳಿದಿದ್ದೇವೆ ಎಂದು ನನಗೆ ಕೂಗುವರು.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;
ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.