ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
Cross references
ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.
ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು.
ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ--
ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?
ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು.
ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.
ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;