Home Bibles ತೀತ 2:12 · ಕನ್ನಡ ಬೈಬಲ್
ತೀತ 2:12 · ಕನ್ನಡ ಬೈಬಲ್

ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.

Cross references

ಕೀರ್ತನೆಗಳು 4:3

ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.

ಕೀರ್ತನೆಗಳು 105:45

ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.

ಯೆಶಾಯ 55:6

ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.

ಯೆಹೆಜ್ಕೇಲ 18:30

ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.

ಯೆಹೆಜ್ಕೇಲ 33:14

ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ

ಯೆಹೆಜ್ಕೇಲ 36:27

ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.

ಮತ್ತಾಯ 3:8

ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;

ಮತ್ತಾಯ 5:19

ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.

ಮತ್ತಾಯ 16:24

ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಮತ್ತಾಯ 28:20

ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

ಲೂಕ 1:6

ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.

ಲೂಕ 1:75

ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.

ಲೂಕ 3:9

ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.

ಯೋಹಾನ 6:25

ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.

ಯೋಹಾನ 14:30

ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.

ಯೋಹಾನ 17:14

ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.

ಅಪೋಸ್ತಲರ ಕೃತ್ಯಗಳು 24:16

ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.

ಅಪೋಸ್ತಲರ ಕೃತ್ಯಗಳು 24:25

ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.

ರೋಮಾಪುರದವರಿಗೆ 6:4

ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.

ರೋಮಾಪುರದವರಿಗೆ 6:12

ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;

ರೋಮಾಪುರದವರಿಗೆ 6:19

ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.

ರೋಮಾಪುರದವರಿಗೆ 8:13

ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.

ರೋಮಾಪುರದವರಿಗೆ 12:2

ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.

ರೋಮಾಪುರದವರಿಗೆ 13:12

ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.

1 ಕೊರಿಂಥದವರಿಗೆ 6:9

ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು

2 ಕೊರಿಂಥದವರಿಗೆ 1:12

ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.

2 ಕೊರಿಂಥದವರಿಗೆ 7:1

ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.

ಗಲಾತ್ಯದವರಿಗೆ 1:4

ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.

ಗಲಾತ್ಯದವರಿಗೆ 5:24

ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.

ಎಫೆಸದವರಿಗೆ 1:4

ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.

ಎಫೆಸದವರಿಗೆ 2:2

ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;

ಎಫೆಸದವರಿಗೆ 4:22

ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.

ಕೊಲೊಸ್ಸೆಯವರಿಗೆ 1:22

ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.

ಕೊಲೊಸ್ಸೆಯವರಿಗೆ 3:5

ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.

1 ತೆಸಲೋನಿಕದವರಿಗೆ 4:7

ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.

1 ತೆಸಲೋನಿಕದವರಿಗೆ 4:9

ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.

1 ತಿಮೋಥೆಯ 4:12

ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.

1 ತಿಮೋಥೆಯ 6:17

ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ

2 ತಿಮೋಥೆಯ 3:12

ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.

2 ತಿಮೋಥೆಯ 4:10

ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;

Interlinear

Choose Theme