ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
Cross references
ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ
ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.
ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.
ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;