ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.
Cross references
ನೀನು ನಿನ್ನ ರಕ್ಷಣೆಯ ಗುರಾಣಿ ಯನ್ನು ನನಗೆ ಕೊಟ್ಟೆ; ನಿನ್ನ ಸೌಮ್ಯತೆಯು ನನ್ನನ್ನು ಹೆಚ್ಚಿಸಿತು.
ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.
ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು.
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.