ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
Cross references
ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
ನಾನೇ ನಿನ್ನ ನೀತಿಯನ್ನೂ ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಅವು ನಿನಗೆ ಪ್ರಯೋಜನವಾಗು ವದಿಲ್ಲ.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.