ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.
Cross references
ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.
ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.
ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. 4
ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.
ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.