ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
Cross references
ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--
ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.
ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.
ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.
ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.
ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇ ನಂದರೆ--
ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ
ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು;
ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.
ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಈ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು.ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.