ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ.
Cross references
ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು.
ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಓ ನನ್ನ ಪ್ರಿಯಳೇ, ಫರೋಹನ ರಥಗಳಲ್ಲಿರುವ ಕುದುರೆಗಳ ಗುಂಪಿಗೆ ನಿನ್ನನ್ನು ಹೋಲಿಸಿದ್ದೇನೆ.
ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.
ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.
ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.
ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.
ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ.
ಕರ್ತನ ಬಲಿಯ ದಿನದಲ್ಲಿ ಆಗುವದೇನಂದರೆ--ನಾನು ಪ್ರಧಾನರನ್ನೂ ಅರಸನ ಕುಮಾರರ ಮಕ್ಕಳನ್ನೂ ಅನ್ಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.
ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.