ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
Cross references
ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ
ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.
ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.
ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.
ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?
ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.