ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
Cross references
ಈ ಇಪ್ಪತ್ತು ವರುಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ ಮೇಕೆಗಳೂ ಕಂದು ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.
ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು.
ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು.
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.
ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ.
ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.
ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.