ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.
Cross references
ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
ಆಳುಗಳು ನಮ್ಮ ಮೇಲೆ ಆಳಿದ್ದಾರೆ; ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವದಿಲ್ಲ.
ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು.
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ಕೂಲಿ ಇರಲಿಲ್ಲ; ಇಲ್ಲವೆ ಹೋಗುವವ ನಿಗೂ ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾ ಧಾನವಿರಲಿಲ್ಲ. ನಾನು ಜನರೆಲ್ಲರಲ್ಲಿ ಪ್ರತಿಯೊಬ್ಬನನ್ನು ತನ್ನ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೆನು.
ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ.
ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.
ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು.
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು.
ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.