ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
Cross references
ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ.
ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.
ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.
ಮಂಜೂಷವು ಕಿರ್ಯತ್ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷ ಇದ್ದಾಗ ಇಸ್ರಾಯೇಲ್ ಮನೆತನದವರೆಲ್ಲರು ಕರ್ತನಿಗೋ ಸ್ಕರ ಗೋಳಾಡುತ್ತಿದ್ದರು.
ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು.
ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.