ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ
Cross references
ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ--
ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.
ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.
ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.