Home Bibles ಜೆಕರ್ಯ 13:2 · ಕನ್ನಡ ಬೈಬಲ್
ಜೆಕರ್ಯ 13:2 · ಕನ್ನಡ ಬೈಬಲ್

ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.

Cross references

ನಿರ್ಗಮಕಾಂಡ 22:13

ಅದು (ಕಾಡು ಮೃಗದಿಂದ) ಕೊಲ್ಲಲ್ಪಟ್ಟಿದ್ದರೆ ಅದನ್ನು ಸಾಕ್ಷಿಗಾಗಿ ತರಲಿ, ಕೊಲ್ಲಲ್ಪಟ್ಟದ್ದಕ್ಕೆ ಬದಲು ಕೊಡಬಾರದು.

ನಿರ್ಗಮಕಾಂಡ 23:13

ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.

ದ್ವಿತೀಯೋಪದೇಶಕಾಂಡ 12:3

ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.

ದ್ವಿತೀಯೋಪದೇಶಕಾಂಡ 18:20

ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.

ಯೆಹೋಶುವ 23:7

ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು

1 ಅರಸುಗಳು 22:22

ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.

ಕೀರ್ತನೆಗಳು 16:4

ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.

ಯೆಶಾಯ 2:18

ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.

ಯೆಶಾಯ 2:20

ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.

ಯೆರೆಮಿಯ 8:10

ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.

ಯೆರೆಮಿಯ 29:23

ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.

ಯೆಹೆಜ್ಕೇಲ 13:12

ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ?

ಯೆಹೆಜ್ಕೇಲ 13:23

ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.

ಯೆಹೆಜ್ಕೇಲ 14:9

ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.

ಯೆಹೆಜ್ಕೇಲ 30:13

ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.

ಯೆಹೆಜ್ಕೇಲ 36:25

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

ಯೆಹೆಜ್ಕೇಲ 37:23

ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.

ಯೆಹೆಜ್ಕೇಲ 43:7

ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ.

ಹೊಶೇಯ 2:17

ಬಾಳ್‌ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ.

ಹೊಶೇಯ 2:19

ನಿನ್ನನ್ನು ನನಗೆ ಸದಾ ಕಾಲಕ್ಕೆ ನಿಶ್ಚಿತ್ತಾರ್ಥ ಮಾಡಿಕೊಳ್ಳುವೆನು; ಹೌದು, ನೀತಿ ಯಿಂದಲೂ ನ್ಯಾಯದಿಂದಲೂ ದಯೆಯಿಂದಲೂ ಕರುಣೆಯಿಂದಲೂ ನನ್ನನ್ನು ನಿನಗೆ ನಿಶ್ಚಿತ್ತಾರ್ಥಮಾಡಿ ಕೊಳ್ಳುವೆನು.

ಹೊಶೇಯ 14:8

ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.

ಮೀಕ 2:11

ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.

ಮೀಕ 5:12

ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ.

ಸೆಫನ್ಯ 1:3

ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.

ಸೆಫನ್ಯ 2:11

ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.

ಮತ್ತಾಯ 7:15

ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.

ಮತ್ತಾಯ 12:43

ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.

ಲೂಕ 11:20

ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.

2 ಕೊರಿಂಥದವರಿಗೆ 11:13

ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.

2 ಪೇತ್ರ 2:1

ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ

2 ಪೇತ್ರ 2:15

ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.

1 ಯೋಹಾನ 4:1

ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

ಪ್ರಕಟನೆ 16:13

ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು.

ಪ್ರಕಟನೆ 18:2

ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್‌ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.

ಪ್ರಕಟನೆ 19:20

ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.

ಪ್ರಕಟನೆ 20:1

ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.

Interlinear

Choose Theme